Tuesday, August 11, 2026
Homeಕಾರ್ಕಳರೆಂಜಾಳ ಭೂಕುಸಿತ : ಅಪಾಯದ ಅಂಚಿನಲ್ಲಿರುವ ದಲಿತರ ಮನೆಗಳಿಗೆ ಪುನರ್ವಸತಿ ಕಲ್ಪಿಸಲು ಕರ್ನಾಟಕ ದಲಿತ ಸಂಘರ್ಷ...

ರೆಂಜಾಳ ಭೂಕುಸಿತ : ಅಪಾಯದ ಅಂಚಿನಲ್ಲಿರುವ ದಲಿತರ ಮನೆಗಳಿಗೆ ಪುನರ್ವಸತಿ ಕಲ್ಪಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧಿಕಾರಿ ಯವರಿಗೆ ಮನವಿ.

ಕಾರ್ಕಳ ತಾಲ್ಲೂಕಿನ ರೆಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ಯಾರಲ್ ಬೆಟ್ಟುವಿವ ಹೆಡ್ಮೇ ಎಂಬಲ್ಲಿ ಗುಡ್ಡ ಭೂಕುಸಿತ ಸಂಭವಿಸಿ ಸುಮಾರು 15 ದಲಿತರ ಮನೆಗಳು ಅಪಾಯದ ಅಂಚಿನಲ್ಲಿ ಇರುವುದರಿಂದ ಕೂಡಲೇ ತುರ್ತು ಕ್ರಮ ಕೈಗೊಂಡು ಅಪಾಯದ ಅಂಚಿನಲ್ಲಿರುವ ಮನೆಯವರಿಗೆ ಪುನರ್ವಸತಿ ಕಲ್ಪಿಸಬೇಕೆಂದು ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಅವರಿಗೆ ಮನವಿ ಕೊಡಲಾಯಿತು.

ನಿಯೋಗದಲ್ಲಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ಟರ್ , ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ , ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments