ಹೆಬ್ರಿ : ಹೆಬ್ರಿಯ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ ನಡೆಯಿತು.
ಅಧ್ಯಕ್ಷರಾದ ನವೀನ್ ಕೆ ಅಡ್ಯಂತಾಯ ಧ್ವಜಾರೋಹಣ ನೆರವೇರಿಸಿದರು.
ಉಪಾಧ್ಯಕ್ಷ ಹರೀಶ್ ಪೂಜಾರಿ ಬೇಳಂಜೆ, ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷ ಹರೀಶ್ ಶೆಟ್ಟಿ ನಾಡ್ಪಾಲು, ವಕೀಲ ಕೃಷ್ಣ ಶೆಟ್ಟಿ, ಲಯನ್ಸ್ ಪ್ರಮುಖರಾದ ಟಿ.ಜಿ ಆಚಾರ್ಯ, ನಾರಾಯಣ ನಾಯ್ಕ್, ಸಂಘದ ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶೀನ ನಾಯ್ಕ್, ಕೃಷ್ಣ ಮೂರ್ತಿ ರಾವ್ ಸೇರಿದಂತೆ ಹಲವರು ಭಾಗಿಯಾದರು.



