ಚಾರ : ಚಾರ ಗ್ರಾಮ ಪಂಚಾಯತ್ ವತಿಯಿಂದ 80 ನೇ ಸ್ವಾಂತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣವನ್ನು ಚಾರ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ದಿನೇಶ್ ಡಿ ಇ ನೆರವೇರಿಸಿದರು.
ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ಆಶಯಗಳಿಗೆ ನಾವು ಬದ್ಧರಾಗಿ ಹಕ್ಕು ಮತ್ತು ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ವಿಕಸಿತ ಭಾರತಕ್ಕಾಗಿ ಕಾರ್ಯನಿರ್ವಹಿಸುವ ಎಂದು ಸ್ವಾತಂತ್ರ್ಯ ಸಂದೇಶವನ್ನು ದಿನೇಶ್ ನೀಡಿದರು.
ಚಾರ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್ ಶೆಟ್ಟಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಖಾ ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ MBK ಎಲ್ ಸಿ ಆರ್ ಪಿ,ಕೃಷಿ ಸಖಿ,ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.


