ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿಪರ್ವ ಕಾಲೇಜಿನಲ್ಲಿಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನದ ಪ್ರಯುಕ್ತ ‘ನಶಾ ಮುಕ್ತ ಅಭಿಯಾನದ’ ಪ್ರತಿಜ್ಞಾ ವಿಧಿಯನ್ನು ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಜೋಗಿ ವಿದ್ಯಾರ್ಥಿಗಳಿಗೆ ಬೋಧಿಸಿದರು.
ನಶೆಯು ಆರಂಭದಲ್ಲಿ ಮನಸ್ಸಿಗೆ ಸಂತೋಷವನ್ನು ಕೊಟ್ಟರೂ, ಕೊನೆಗೆ ನಮ್ಮ ಜೀವವನ್ನೇ ಬಲಿ ತೆಗೆದುಕೊಳ್ಳುತ್ತದೆ. ಆದ್ದರಿಂದ ನಾವೆಲ್ಲರೂ ನಶೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ಪ್ರಕಾಶ್ ಜೋಗಿ ಹೇಳಿದರು. ಬೋಧಕ ಮತ್ತು ಬೋಧಕೇತರ ವೃಂದದವರು ಉಪಸ್ಥಿತರಿದ್ದರು.


